ಅಭಿನಂದನಾರ್ಹ ಮುಸ್ಲಿಂ ರಾಷ್ಟ್ರೀಯ ಮಂಚ್ |
ಪ್ರಕಟಿಸಿದ ದಿನಾಂಕ : 2010-03-15
ಕೆಲ ದಿನಗಳ ಹಿಂದೆಯಷ್ಟೇ 'ಗೋ ಹತ್ಯೆ ನಿಷೇಧ ಕಾಯಿದೆಯ' ವಿರೋಧ ಮಾಡಲು ಕೆಲ ವಿಕೃತ ಮನಸ್ಸಿನ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆವರಣದಲ್ಲೇ ಗೋವಿನ ಮಾಂಸ ಭಕ್ಷಣೆ ಮಾಡು ವ ಮೂಲಕ ರಾಜ್ಯವ್ಯಾಪಿ ಪ್ರಸಿಧ್ಧಿಯಾದರು.
ಈ ವಿಷಯವಾಗಿ ಹಲವಾರು ಬುಧ್ಧಿಜೀವಿಗಳು, ಸಂಘಟನೆಗಳು ಕಾಯಿದೆಯ ವಿರುದ್ಧ ಪ್ರತಿಭಟಿ ಸುತ್ತಲೇ ಬಂದಿದ್ದಾರೆ. 'ಅಲ್ಪಸಂಖ್ಯಾತರ ಹಾಗು ದಲಿತರ ಆಹಾರ ಸ್ವಾತಂತ್ರ್ಯ'ಕ್ಕೆ ಧಕ್ಕೆ ಬರು ತ್ತದೆ ಎಂದು ಬೊಂಬಡಿ ಬಜಾಯಿಸುತ್ತಿದ್ದಾರೆ.
ಆದರೆ ಇದೇ ಗೋಹತ್ಯೆ ನಿಷೇಧದ ಕಾನೂನಿನ ಜಾರಿಗೋಸ್ಕರ ರಾಘವೇಶ್ವರ ಭಾರತಿ ಸ್ವಾಮೀ ಜಿಗಳ ಜತೆ ಕೈ ಜೋಡಿಸಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿರುವ ಸುಮಾರು ಮೂರು ಲಕ್ಷಕ್ಕೂ ಅಧಿಕ ಮುಸ್ಲಿಮರು ಮನುಷ್ಯರಲ್ಲವೇ? ಅವರ 'ಆಹಾರ ಸ್ವಾತಂತ್ರ್ಯ' ಹರಣವಾಗುವುದಿ ಲ್ಲವೇ?
ಮುಸ್ಲಿಂ ರಾಷ್ಟ್ರೀಯ ಮಂಚ್ ಎಂಬ ಸಂಘಟನೆ ಹಲವಾರು ತಿಂಗಳುಗಳಿಂದ ಗೋಹತ್ಯೆಯನ್ನು ನಿಷೇಧಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಡುತ್ತಲೇ ಬಂದಿದೆ. ಕೃಷಿ ಅಭಿವೃದ್ಧಿಗೆ ಮಾರಕವಾದ ಗೋಹತ್ಯೆಯನ್ನು ಖಂಡಿತವಾಗಿ ನಿಷೇಧಿಸಬೇಕು ಎಂದು ಮುಸ್ಲಿಂ ಜಾಗರಣ ಮಂಚ್ ನ ಕೆ.ಎಂ. ಅನೀಸ್ ಉಲ್ ಹಕ್ ರವರು ಸಾರ್ವಜನಿಕ ವೇದಿಕೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಒಳ್ಳೆಯ ಕೆಲಸಕ್ಕೋಸ್ಕರ ಎಲ್ಲ ಮುಸ್ಲಿಮರೂ ಕೈ ಜೋಡಿಸಬೇಕು ಎಂದು ಕರೆ ಕೊಟ್ಟಿದ್ದಾರೆ.
ಆದರೆ ಕೆಲ ಸ್ವಾರ್ಥರೋಗ ಪೀಡಿತ ರಾಜಕಾರಣಿಗಳು ಹಾಗು ಬುದ್ಧಿಜೀವಿಗಳಿಂದ ಇದಕ್ಕೆ ವಿರೋ ಧ ವ್ಯಕ್ತವಾಗುತ್ತಿದೆ. ತಮ್ಮ 'ಬಿಜೆಪಿ ವಿರೋಧಿ' ನಿಲುವಿನಡಿಯಲ್ಲಿ ಮುಸ್ಲಿಮರನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಈ ಮೂಲಕ ತಮ್ಮ ರಾಜಕೀಯ ಸ್ವಾರ್ಥದ ಬೇಳೆಯನ್ನು ಬೇಯಿಸಿಕೊ ಳ್ಳಲಾಗುತ್ತಿದೆ.
ಆದರೆ ಇವುಗಳ ಹಿಂದಿನ ದುರುದ್ದೇಶಗಳನ್ನು ಅರ್ಥ ಮಾಡಿಕೊಂಡಿರುವ ಸಜ್ಜನ ಮುಸ್ಲಿಮರು 'ಗೋಹತ್ಯೆ ನಿಷೇಧ ಕಾನೂನಿನ' ಜಾರಿಗೊಸ್ಕರ ಒತ್ತಾಯಿಸುತ್ತಿದ್ದಾರೆ. ತಮ್ಮ ಧರ್ಮದವರ ಜಾಗೃತಿಗೋಸ್ಕರ ಕೆಲಸ ಮಾಡುತ್ತಿದ್ದಾರೆ. ರಾಷ್ಟ್ರದ ಒಳಿತಿಗೋಸ್ಕರ, ದುಷ್ಟ ರಾಜಕಾರಣಿಗಳ ಓಲೈಕೆಗೆ ಕಿವಿಗೊಡದೆ ಮುನ್ನಡೆಯುತ್ತಿರುವ ಮುಸ್ಲಿಂ ರಾಷ್ಟ್ರೀಯ ಮಂಚ್ ನ ಎಲ್ಲ ಕಾರ್ಯ ಕರ್ತರೂ ಅಭಿನಂದನಾರ್ಹರು.
ನಿಷ್ಕ್ರಿಯರಾಗಿರುವ ಎಲ್ಲ ಸಜ್ಜನರೂ ಸಕ್ರಿಯರಾಗಿರಬೇಕು. ರಾಷ್ಟ್ರೀಯತೆಯ ಪ್ರವಾಹದಲ್ಲಿ ಒಂ ದಾಗಬೇಕು.
ವರದಿಯ ವಿವರಗಳು |
 |
ಕೃಪೆ : ಮತ್ತೂರು ರಘು ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-15
|
|
|