
ಮಂಗಳೂರು, ಸೆ.7: ಬಾಗಿನಮಲೆ ಮೀಸಲು ಅರಣ್ಯದಲ್ಲಿ ಮಂಗಳವಾರ ರಾತ್ರಿ ಗುಂಡಿನ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಗೆಯಾಗಿದೆ ಎಂದು ನಕ್ಸಲ್ ನಿಗ್ರಹ ಪಡೆಯ ಐಜಿಪಿ ಅಲೋಕ್ಕುಮಾರ್ ತಿಳಿಸಿದ್ದಾರೆ.
ರಾಯಚೂರ ಜಿಲ್ಲೆಯ ಮಾನ್ವಿ ತಾಲೂಕಿನ ಯಲ್ಲಪ್ಪಾ ಯಾನೆ ದಿನಕರ್ ಎಂದು ಗುರುತಿಸಲಾಗಿದೆ.
ಈತ ನಕ್ಸಲ್ ಕಾರ್ಯಚಟುವಟಿಕೆಯ ಬಗ್ಗೆ ಆಂಧ್ರದಲ್ಲಿ ತರಬೇತಿ ಪಡೆದಿದ್ದು, ಇಲ್ಲಿ ತರಬೇತಿ ನೀಡುವುದಕ್ಕಾಗಿ ಬಂದಿರುವ ಸಾಧ್ಯತೆ ಇದೆ. ದಿನಕರ್ನ ಬಗ್ಗೆ ಹಾಗೂ ಅವರ ಕುಟುಂಬದ ಬಗ್ಗೆ ಇನ್ನಷ್ಟು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಐಜಿಪಿ ಅಲೋಕ್ಕುಮಾರ್ ಮಾಹಿತಿ ನೀಡಿದ್ದಾರೆ.
ಹಿಂದಿನ ವರದಿ:



























